ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣದ ಮುಖ್ಯ ಆರೋಪಿ ಮೃತ್ಯುಂಜಯಶ್ರೀ ಜೈಲುಪಾಲು
ಬೆಂಗಳೂರು:ರಾಮನಗರ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯನ್ನು ಮುಂದಿಟ್ಟುಕೊಂಡು ಹನಿಟ್ರ್ಯಾಪ್ ಮಾಡಿದ್ದ ಮೃತ್ಯುಂಜಯಶ್ರೀ ಸೇರಿದಂತೆ ಮೂವರು ಆರೋಪಿಗಳಿಗೆ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.
ಸ್ವಾಮೀಜಿ ಮತ್ತು ಹನಿಟ್ರ್ಯಾಪ್ ಜಾಲ ಹೆಣೆದ ಕಣ್ಣೂರು ಮಠದ ಡಾ ಮೃತ್ಯುಂಜಯ ಸ್ವಾಮೀಜಿ ಹಾಗೂ, ನೀಲಾಂಬಿಕೆ, ಮಹದೇವಯ್ಯನನ್ನು ಇಂದುಪೊಲೀಸರು ಬಂಧಿಸಿ ನ್ಯಾಯಾಲಕ್ಕೆ ಒಪ್ಪಿಸಿದ್ದರು. ಇದೀಗ ಕೋರ್ಟ್, ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.