ಕಲಬುರ್ಗಿ

ಕಲಬುರಗಿಯಲ್ಲಿ ಕೇಸರಿ ಪಾಳ್ಯದ ರಣಕಹಳೆ

ಕಲ್ಬುರ್ಗಿ: ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಕಲ್ಬುರ್ಗಿಯಲ್ಲಿ ಬಿಜೆಪಿ ಒಬಿಸಿ ಸಮಾವೇಶವನ್ನು ಅದ್ದೂರಿಯಾಗಿ ನಡೆಸಿದರು .ಹಿಂದುಳಿದ ವರ್ಗಗಳ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ , ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು ಕಲಬುರಗಿಯಲ್ಲಿ. ರಾಜ್ಯದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೊ ಯಾತ್ರೆ ಮುಕ್ತಾಯವಾದ ಬೆನ್ನಲ್ಲೆ, ಇದೀಗ ಕೇಸರಿ ಪಡೆ ಒಬಿಸಿ ಸಮಾವೇಶದ ಮೂಲಕ ರಣಕಹಳೆ ಮೊಳಗಿಸಿದೆ‌. ವೇದಿಕೆಯಲ್ಲಿ ಮಾತನಾಡಿದ ಬಿಜೆಪಿಯ ಬಹುತೇಕ ನಾಯಕರ ಟಾರ್ಗೆಟ್ ಮಾಜಿ ಮುಖ್ಯಮಂತ್ರಿ ಸಿದ್ರಾಮಯ್ಯನವರೇ ಆಗಿದ್ದರು. ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಹಿಂದುಳಿದ ವರ್ಗಗಳ ಜನರ ಈ ಪರಿ ಬೆಂಬಲ ನೋಡಿದರೆ ನಮ್ಮ ಗೆಲುವು ಖಚಿತ. ನಿಮಗೆ ತಾಕತ್ ಇದ್ದರೆ, ನಮ್ಮ ವಿಜಯ ಪತಾಕೆಯನ್ನ ತಡೆಯಿರಿ ಅಂತಾ ಕಾಂಗ್ರೆಸ್‌ ನಾಯಕರಿಗೆ ಬಹಿರಂಗ ಸವಾಲು ಹಾಕಿದರು.

ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ, ತಳವಾರ ಸಮುದಾಯ ಎಸ್ಟಿಗೆ ಸೇರ್ಪಡೆಯನ್ನು ಬಹುವಾಗಿ ಪ್ರಸ್ತಾಪಿಸಿದ ಬಿಜೆಪಿ ನಾಯಕರುಗಳು, ಸಿದ್ರಾಮಯ್ಯನವರು ಒಬಿಸಿ ಮತಗಳಿಸಿ ಸಿಎಂ ಆದ ಮೇಲೆ ಅನ್ಯಾಯ ಮಾಡಿದ್ದಾರೆ. ಅವರನ್ನು ನಂಬಬೇಡಿ ಎಂದು ಕರೆ ನೀಡಿದರು.  ಇನ್ನು ಮಾಜಿ ಸಿಎಂ ಯಡಿಯೂರಪ್ಪ ಮಾತನಾಡಿ, ಸದ್ಯದಲ್ಲಿಯೇ ಮೈಸೂರಿನಿಂದ ರಥಯಾತ್ರೆ ಆರಂಭಿಸುತ್ತೆನೆ ಎಂದು ಹೇಳಿದರು.

TV24 News Desk
the authorTV24 News Desk

Leave a Reply