ಬೆಳಗಾವಿಬೆಳಗಾವಿ ನಗರ

ಬೆಳಗಾವಿ ರಾಜ್ಯೋತ್ಸವ : ಭಾರೀ ಬಿಗಿ ಭದ್ರತೆ

ಬೆಳಗಾವಿ :ನಾಡಿನಾದ್ಯಂತ ಕನ್ನಡದ ಹಬ್ಬ  ರಾಜ್ಯೋತ್ಸವದ ಅಂಗವಾಗಿ ಬೆಳಗಾವಿಯಲ್ಲಿ ಅದ್ಧೂರಿ ಆಚರಣೆಗಾಗಿ ಈಗಾಗಲೇ ಸಿದ್ಧತೆ ನಡೆಸಿದೆ. ಬೆಳಗಾವಿ ನಗರ ಪೊಲೀಸ ಆಯುಕ್ತ  ಡಾ.ಎಂ.ಬಿ.ಬೋರಲಿಂಗಯ್ಯ ನೇತೃತ್ವದಲ್ಲಿ ಪೊಲೀಸ್ ವಾಹನಗಳು  ನಗರದ ಬೀದಿಗಳಲ್ಲಿ ಪಥಸಂಚಲನ ನಡೆಸಿದರು.ರಾಜ್ಯೋತ್ಸವದಂದು ‘ಕರಾಳ ದಿನ’ ಆಚರಿಸಲು ನಾಡದ್ರೋಹಿ ಎಂಇಎಸ್‌ ತಯಾರಿ  ನಡೆಸಿದ್ದಾರೆ.

ಕನ್ನಡ ರಾಜ್ಯೋತ್ಸವ ದಿನದಂದು ಎಂಇಎಸ್​ನಿಂದ ಕರಾಳ ದಿನಾಚರಣೆ ಮಾಡಲಾಗುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮೂವರು ಡಿಸಿಪಿಗಳ ನೇತೃತ್ವದಲ್ಲಿ 3,000ಕ್ಕೂ ಅಧಿಕ ಪೊಲೀಸರು 300 ಅಧಿಕ ಸಿಸಿ ಕ್ಯಾಮೆರಾ ಬಳಸಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಎಂಇಎಸ್ ಪುಂಡರ್ ಕರಾಳ ದಿನಾಚರಣೆ ಹಿನ್ನೆಲೆ ನಗರದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಬೆಳಗಾವಿ ನಗರ ಪೊಲೀಸ ಆಯುಕ್ತ  ಡಾ.ಎಂ.ಬಿ.ಬೋರಲಿಂಗಯ್ಯ ನೇತೃತ್ವದಲ್ಲಿ ಪೊಲೀಸ್ ವಾಹನಗಳು  ನಗರದ ಬೀದಿಗಳಲ್ಲಿ ಪಥಸಂಚಲನ ನಡೆಸಿದರು.

 

 

TV24 News Desk
the authorTV24 News Desk

Leave a Reply