ಬೆಳಗಾವಿ : ರಾಜ್ಯೋತ್ಸವದ ಅಂಗವಾಗಿ ಬೆಳಗಾವಿಯಲ್ಲಿ ಅದ್ಧೂರಿ ಆಚರಣೆಗಾಗಿ ಈಗಾಗಲೇ ಭರದ ಸಿದ್ಧತೆ ನಡೆಸಿದೆ.ಎಂಇಎಸ್, ಶಿವಸೇನೆ ಕಾರ್ಯಕರ್ತರು ಕೈಯಲ್ಲಿ ಭಗವಾಧ್ವಜ, ಮಶಾಲ್ ಹಿಡಿದು ಬೆಳಗಾವಿಗೆ ಹೋಗ್ತೇವೆ ಶಿವಸೇನೆ ಉದ್ದಟತನ ಹೇಳಿಕೆ ನೀಡಿದೆ .ಕಾಗಲ್ ಚೆಕ್ಪೋಸ್ಟ್ನಲ್ಲಿ ತಡೆದ್ರೆ ಶಿನೋಳಿ ಮಾರ್ಗವಾಗಿ ಬೆಳಗಾವಿಗೆ ಹೋಗ್ತೀವಿ, ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ಹೇಳಿಕೆ ನೀಡಿದ್ದರು.
ಕನ್ನಡ ರಾಜ್ಯೋತ್ಸವ ದಿನದಂದು ಎಂಇಎಸ್ದ ಕರಾಳ ದಿನಾಚರಣೆ ಮಾಡಲಾಗುತ್ತಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮೂವರು ಡಿಸಿಪಿಗಳ ನೇತೃತ್ವದಲ್ಲಿ 3,000ಕ್ಕೂ ಅಧಿಕ ಪೊಲೀಸರು 300 ಅಧಿಕ ಸಿಸಿ ಕ್ಯಾಮೆರಾ ಬಳಸಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಮಹಾರಾಷ್ಟ್ರದಿಂದ ಶಿನ್ನೊಳ್ಳಿ ಮಾರ್ಗವಾಗಿ ಬೆಳಗಾವಿಗೆ ಬರುತ್ತಿರುವ ಎಲ್ಲ ವಾಹನಗಳನ್ನು ಬ್ಯಾರಿಕೇಟಗಳನ್ನು ಹಾಕಿ ಅತಿ ಸೂಕ್ಷಮ ರೀತಿಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ.