ಬೆಳಗಾವಿ: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಈ ಬಾರಿ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಆದರೆ ಬೆಳಗಾವಿ ಎಂಇಎಸ್ ಮತ್ತು ಶಿವಸೇನೆ ಕಾರ್ಯಕರ್ತರು ಕರಾಳ ದಿನಾವಾಗಿ ಆಚರಿಸಲು ನಿರ್ಧರಿಸಿದೆ. ಈ ಸಂಬಂಧ ಕಾರ್ಯಕರ್ತರು ಬೆಳಗಾವಿಯನ್ನು ಪ್ರವೇಶಿಸದಂತೆ ಪೊಲೀಸರು ಗಡಿಯಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ಆದರೆ ಶಿವಸೇನೆ ಕಾರ್ಯಕರ್ತರು ಬೆಳಗಾವಿ ಗಡಿಯಲ್ಲಿ ಪೊಲೀಸರೊಂದಿಗೆ ಹೈಡ್ರಾಮಾ ಮಾಡಿದ್ದಾರೆ. ನಿಪ್ಪಾಣಿ ತಾಲೂಕಿನ ಕೊಗನೋಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ. ಆದರೂ ಕರ್ನಾಟಕದ ಖಾಕಿಪಡೆ ಬ್ಯಾರಿಕೇಡ್ ಹಾಕಿ ಕರ್ನಾಟಕದಲ್ಲಿ ಪ್ರವೇಶಿಸದಂತೆ ತಡೆದಿದ್ದಾರೆ.
ಆದೆರೆ ಶಿವಸೇನೆ ಕಾರ್ಯಕರ್ತರು ಬೆಳಗಾವಿಯೊಳಗೆ ಪ್ರವೇಶ ನೀಡುವಂತೆ ಹೈಡ್ರಾಮಾ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 4 ಮೇಲೆಯೇ ಕುಳಿತು ಪ್ರತಿಭಟನೆ ಮಾಡಿದ್ದಾರೆ. ಈ ವೇಳೆ ಪೊಲೀಸರು ಮತ್ತು ಶಿವಸೇನೆ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ, ತಳ್ಳಾಟ ನೂಕಾಟ ನಡೆದಿದೆ. ಪೊಲೀಸರು ನಿರ್ಬಂಧ ಹೆರಿದ್ದಕ್ಕೆ ರಸ್ತೆ ಪಕ್ಕದ ನದಿಗೆ ಇಳಿದು ಪ್ರತಿಭಟನೆ ಮಾಡಿದ್ದಾರೆ.
tv24plus.in > Blog > ಜಿಲ್ಲೆ > ಬೆಳಗಾವಿ > ರಾಜ್ಯದ ಗಡಿ ಎಂಟ್ರಿ ಕೊಟ್ಟ ನಾಡದ್ರೋಹಿಗಳ ಸೇದೆ ಬಡೆದ ಪೊಲೀಸರು