ನಿಪ್ಪಾಣಿ: ೬೭ ನೇ ಕನ್ನಡ ರಾಜ್ಯೋತ್ಸವ ಆಚರಣೆ ಅಂಗವಾಗಿ ನಿಪ್ಪಾಣಿ ನಗರದಲ್ಲಿ ಆಯೋಜಿಸಲಾಗಿದ್ದ ಕನ್ನಡ ತಾಯಿ ಶ್ರೀ ಭುವನೇಶ್ವರಿ ದೇವಿ ಭಾವಚಿತ್ರ ಮೆರವಣಿಗೆಗೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಚಾಲನೆ ನೀಡಿದರು. ಮಕ್ಕಳು ಕರುನಾಡಿಗಾಗಿ ಹಾಗೂ ದೇಶಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಹೋರಾಟಗಾರರು, ಸಾಹಿತಿಗಳು, ವೀರನಾರಿಯರ ವೇಷ ಭೂಷಣ ತೊಟ್ಟು ಮೆರವಣಿಗೆಗೆ ಮೆರಗು ನೀಡಿದರು.
tv24plus.in > Blog > ಜಿಲ್ಲೆ > ಬೆಳಗಾವಿ > ನಿಪ್ಪಾಣಿಯಲ್ಲಿ ಅದ್ದೂರಿಯಾಗಿ ರಾಜ್ಯೋತ್ಸವ ಆಚರಣೆ