ಬೆಂಗಳೂರು: ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಬಳಿ ತುಂಗಾ ಕಾಲುವೆಯಲ್ಲಿ ಶವ ಪತ್ತೆಯಾಗಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿರುವುದಾಗಿ ಗೃಹಸಚಿವ ಆರಗ ಜ್ಞಾನೇಂದ್ರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲುವೆಯಲ್ಲಿ ಪಲ್ಟಿಯಾಗಿದ್ದ ಕಾರಿನಲ್ಲಿ ಮೃತದೇಹ ಪತ್ತೆ ಆಗಿದೆ. ಈ ಘಟನೆ ಬಗ್ಗೆ ಪೊಲೀಸರು ತನಿಖೆ ಚುರುಕು ಗೊಳಿಸಿದ್ದಾರೆ. ಪ್ರಕರಣದ ಬಗ್ಗೆ ಎಲ್ಲಾಆಯಾಮಗಳಲ್ಲೂ ತನಿಖೆ ನಡೆಸಲಾಗುವದು ಎಂದರು.
ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಾರೆ. ತನಿಖೆಯಿಂದ ಮತ್ತಷ್ಟು ಮಾಹಿತಿ ಹೊರ ಬರಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ಎಲ್ಲ ಠಾಣೆಗಳನ್ನು ಅಲರ್ಟ್ ಮಾಡಿ ಸಿಸಿಟಿವಿ ಪರಿಶೀಲನೆ ಮಾಡಲಾಗಿದೆ. ಈ ನಡುವೆ ಕೆಲವು ಶಂಕೆ ವ್ಯಕ್ತಪಡಿಸಲಾಗುತ್ತಿದೆ. ಎಲ್ಲವನ್ನೂ ಕೂಡ ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ