ಬೆಳಗಾವಿ

ಬೋನಿಗೆ ಬಿದ್ದ ಕತ್ತೆ ಕಿರುಬ ನಿಟ್ಟುಸಿರುಬಿಟ್ಟ ಅಥಣಿ ಜನತೆ  

ಅಥಣಿ‌:  ಅಥಣಿ‌ ಪಟ್ಟಣದ ಹೊರವಲಯದಲ್ಲಿರುವ ಶಿವಯೋಗಿ‌ ನಗರದ, ಕುಮಠಳ್ಳಿ ಫಾರ್ಮಹೌಸ್ ನಲ್ಲಿ ಕತ್ತೆ ಕಿರುಬ ಒಂದು ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸಿತ್ತು, ಕತ್ತೆ ಕಿರುಬವನ್ನ ದೂರದಿಂದ ನೋಡಿದ ಸಾರ್ವಜನಿಕರು ಚಿರತೆ ಬಂದಿದೆ ಎಂದು ವದಂತಿ ಹಬ್ಬಿಸಿದ್ದರು.  ಅಥಣಿ ಪ್ರಾದೇಶಿಕ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಿಯರ ಸಹಕಾರದಿಂದ ಕಾರ್ಯಾಚರಣೆ ನಡೆಸಿ ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾದರು.

ಕೋಕಟನೂರ,ಕಾತ್ರಾಳ,ಐನಾಪೂರ,ಕೃಷ್ಣಾ ಕಿತ್ತೂರ,ಸುಟ್ಟಟ್ಟಿ,ಮೊಳವಾಡ,ಶೇಗುಣಸಿ ಮೊದಲಾದ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡ ವದಂತಿ ಹಬ್ಬಿದ್ದು ಸ್ಥಳಕ್ಕೆ ಭೇಟಿ ನೀಡಿ ಹೆಜ್ಜೆ ಗುರುತುಗಳನ್ನು ಪರಿಶೀಲಿಸಿದ್ದ ಅರಣ್ಯ ಇಲಾಖೆಯ ಸಿಬ್ಬಂದಿ ಇದು ಕತ್ತೆ ಕಿರುಬದ ಹೆಜ್ಜೆ ಎಂದು ಹೇಳಿದ್ದರು.

ಅಥಣಿ ಶಾಸಕ ಮಹೇಶ್ ಕುಮಠಳ್ಳಿಯವರ ಫಾರ್ಮಹೌಸ್ ನಲ್ಲಿ ಪತ್ತೆಯಾದ ಕತ್ತೆ ಕಿರುಬವನ್ನು ಸತತವಾಗಿ ಒಂದುವರೆ ಗಂಟೆ ಯಶಸ್ವಿ ಕಾರ್ಯಾಚರಣೆ ಮಾಡಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಿಯರ ಸಹಕಾರದಿಂದ ಕತ್ತೆ ಕಿರುಬವನ್ನು  ಹಿಡಿದು ಸಾರ್ವಜನಿಕರ ಆತಂಕ ದೂರ ಮಾಡಿದ್ದಾರೆ. ಅಥಣಿ ಪ್ರಾದೇಶಿಕ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಿಯರ ಸಹಕಾರದಿಂದ ಕಾರ್ಯಾಚರಣೆ ನಡೆಸಿ ಬೋನಿಗೆ ಬೀಳಿಸುವಲ್ಲಿ ಯಶಸ್ವಿಯಾದರು.

ಅಥಣಿ ಶಾಸಕ ಮಹೇಶ್ ಕುಮಠಳ್ಳಿಯವರ ಫಾರ್ಮಹೌಸ್ ನಲ್ಲಿ ಪತ್ತೆಯಾದ ಕತ್ತೆ ಕಿರುಬವನ್ನು ಸತತವಾಗಿ ಒಂದುವರೆ ಗಂಟೆ ಯಶಸ್ವಿ ಕಾರ್ಯಾಚರಣೆ ಮಾಡಿ ಹಿಡಿದು ಸಾರ್ವಜನಿಕರ ಆತಂಕ ದೂರ ಮಾಡಿದ್ದಾರೆ.

TV24 News Desk
the authorTV24 News Desk

Leave a Reply