ಬೆಳಗಾವಿ : ಇತ್ತೀಚೆಗೆ ನಿಧನರಾದ ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ಆನಂದ ಮಾಮನಿ ಅವರ ಪತ್ನಿ ರತ್ನಾ ಅವರಿಗೆ ಬಿಜೆಪಿ ಟಿಕೆಟ್ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ಹೈಕಮಾಂಡ್ ಜೊತೆ ಮಾತನಾಡಿದ್ದೇನೆ, ತಾವು ಕಾಳಜಿ ಮಾಡಬೇಡಿ ಎಂದು ರತ್ನಾ ಮಾಮನಿ ಅವರಿಗೆ ಬರವಸೆ ನೀಡಿದ್ದಾರೆ.
ನಿನ್ನೆ ರಾಮದುರ್ಗ ತಾಲ್ಲೂಕಿನ ದೊಡ್ಡಮಂಗಡಿಯಲ್ಲಿ ಬಸವೇಶ್ವರರ ಪುತ್ಥಳಿ ಅನಾವರಣ ಮಾಡಿದ ಬಳಿಕ ರತ್ನಾ ಮಾಮನಿ ಅವರೊಂದಿಗೆ ಮಾತನಾಡಿದ ಬೊಮ್ಮಾಯಿ , ಕ್ಷೇತ್ರದ ಹಿತ ದೃಷ್ಟಿಯಿಂದ ಈ ಸಲ ಟಿಕೆಟ್ ನಿಮಗೆ ಕೊಡುತ್ತೆವೆ ಎಂದು ಸಿ ಎಂ ಬೊಮ್ಮಾಯಿ ಭರವಸೆ ಕೊಟ್ಟಿದ್ದಾರೆ.