ಬೆಳಗಾವಿಬೆಳಗಾವಿ ನಗರ

ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಚನ್ನರಾಜ್ ಹಟ್ಟಿಹೊಳಿ  ಬಿಜೆಪಿಗೆ ಸೇರ್ಪಡೆ ?  

ಬೆಳಗಾವಿ : ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಬರ್ತಡೆಗೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ  ಮಲ್ಲಿಕಾರ್ಜುನ  ಖರ್ಗೆ  ಬರುತ್ತಿರುವುದು ಹಾಸ್ಯಾಸ್ಪದ  ಎಂದು ಮಾಜಿ ಶಾಸಕ  ಸಂಜಯ  ಪಾಟೀಲ  ಹೇಳಿದ್ದಾರೆ.  ವಿಧಾನ ಪರಿಷತ ಸದಸ್ಯ  ಚನ್ನರಾಜ್ ಹಟ್ಟಿಹೊಳಿ ಬೆಳಗಾವಿಯ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಬಗ್ಗೆ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ಬಿಜೆಪಿ ಮಾಜಿ ಶಾಸಕ ಸಂಜಯ ಪಾಟೀಲ್ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಚನ್ನರಾಜ್ ಹಟ್ಟಿಹೊಳಿ ಇಬ್ಬರೂ ಬಿಜೆಪಿ ಸೇರುವ ಸುದ್ದಿ ಇದೆ. ಬಿಜೆಪಿ ಉದಯಿಸುತ್ತಿರುವ ಸೂರ್ಯಕಾಂಗ್ರೆಸ್ ಮುಳುಗುತ್ತಿರುವ ಹಡಗುಮುಳುಗುವ ಹಡಗನ್ನು ಯಾರೂ ಹತ್ತುವುದಿಲ್ಲ. ಹೀಗಾಗಿ ಪಕ್ಷಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಎನ್ನುವ ನಿರ್ಧಾರವನ್ನು ಬಿಜೆಪಿ ಹೈಕಮಾಂಡ್ ಮಾಡುತ್ತದೆ ಎನ್ನುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

 ಬಿಜೆಪಿ ಮುಖಂಡ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ತಿಂಗಳು ಜೈಲಿನಲ್ಲಿ ಇದ್ದ ವಿನಯ ಕುಲಕರ್ಣಿ ಅವರ ಜನ್ಮ ದಿನಾಚರಣೆ ಮಾಡುತ್ತಿರುವುದು ವಿಚಿತ್ರ.  ಈ ಕಾರ್ಯಕ್ರಮಕ್ಕೆ  ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶುಭಾಶಯ ಕೋರಲು ಬರುತ್ತಿದ್ದಾರೆ. ಅವರ ಮೇಲೆ ಕ್ರಿಮಿನಲ್ ವ್ಯಕ್ತಿಯ ಜನ್ಮ ದಿನಾಚರಣೆಗೆ ಆಗಮಿಸುತ್ತಿರುವ ಕಾಂಗ್ರೆಸ್ ನಾಯಕರು ಆಗಮಿಸಿ ಸಮಾಜಕ್ಕೆ ಏನು ಸಂದೇಶ ಕೊಡಲು ಹೊರಟಿದ್ದಾರೆ ಎಂದು ಮಾಜಿ ಶಾಸಕ ಸಂಜಯ್ ಪಾಟೀಲ್ ಪ್ರಶ್ನಿಸಿದ್ದಾರೆ. 

TV24 News Desk
the authorTV24 News Desk

Leave a Reply