ಬೆಳಗಾವಿಬೆಳಗಾವಿ ನಗರ

 ಕನ್ನಡದ ವಿಷಯದಲ್ಲಿ ರಾಜಕಾರಣಿಗಳು ರಣಹೇಡಿಗಳು :ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ

ಬೆಳಗಾವಿ: ಕನ್ನಡ ವಿಷಯದಲ್ಲಿ ರಾಜಕಾರಣಿಗಳು ರಣ ಹೇಡಿಗಳು. ಕನ್ನಡದ ಉಳಿವಿಗಾಗಿ ಕೇವಲ ಕನ್ನಡ ಸಂಘಟನೆಗಳು ಮಾತ್ರ ಹೋರಾಟ ಮಾಡುತ್ತಿವೆ ಎನ್ನುವ ಮೂಲಕ ರಾಜಕಾರಣಿಗಳ ವಿರುದ್ಧ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ  ಜೊತೆಗೆ ಮಾತನಾಡಿದ ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಕರ್ನಾಟಕದ ಬಸ್‍ಗಳ ಮೇಲೆ ಮರಾಠಿ ಅಕ್ಷರಗಳಿವೆ. ಆದರೆ ಮಹಾರಾಷ್ಟ್ರದ ಬಸ್‍ಗಳ ಮೇಲೆ ಕನ್ನಡದ ಅಕ್ಷರಗಳಿಲ್ಲ. ಈ ಸಂಬಂಧ ನಿಮ್ಮ ಸಂಘಟನೆ ಹೋರಾಟ ಮಾಡಿ ಸರ್ಕಾರದ ಮೇಲೆ ಒತ್ತಡ ಹಾಕಬಹುದಲ್ಲ ಎಂಬ ಮಾಧ್ಯಮಗಳ ಪ್ರಶ್ನೆಗೆ ಕನ್ನಡದ ವಿಷಯದಲ್ಲಿ ರಾಜಕಾರಣಿಗಳು ರಣಹೇಡಿಗಳು. ಕನ್ನಡದ ವಿಷಯ, ಕನ್ನಡಿಗರ ಪರವಾಗಿ ಇವರು ಎಂದೂ ಧ್ವನಿ ಎತ್ತಿಲ್ಲ. ಬೆಳಗಾವಿಯಲ್ಲಿ ಕಾರ್ಯಕ್ರಮ ಮಾಡಿದಾಗ ಇಲ್ಲಿಯ  ರಾಜಕಾರಣಿಗಳ ಮನೆಗೆ ಹೋಗಿ ಬನ್ನಿ ಎಂದರು  ಒಬ್ಬರೂ ಬರಲಿಲ್ಲ. ಅಂಥ ರಣಹೇಡಿಗಳಿದ್ದಾರೆ. ಅವರ ವಿರುದ್ಧ ನಾವು ನಿರಂತರವಾಗಿ ಪ್ರತಿಭಟನೆ ಮಾಡಿಕೊಂಡು ಬಂದಿದ್ದೇವೆ. ಅವರು ಕೇಳುತ್ತಾರೆ, ಮಾಡುತ್ತಾರೆ ಎಂದರೆ ನಾವು ಒಪ್ಪುವುದಿಲ್ಲ, ಮಾಡುವುದಿಲ್ಲ ಎಂದು ಕಿಡಿಕಾರಿದರು.

ಕಲ್ಯಾಣ ಕರ್ನಾಟಕದ ಮತ್ತೊಂದು ಭಾಗದಲ್ಲಿ ಬೆಳ್ಳಿ ಹಬ್ಬ ಆಚರಣೆ ಮಾಡಬೇಕೆಂದು ನಮ್ಮ ಕೇಂದ್ರ ಸಮಿತಿ ನಿರ್ಧಾರ ಮಾಡಿದೆ. ಉತ್ತರ ಕರ್ನಾಟಕ ಎಂದಾಗ ಬೆಳಗಾವಿಯಲ್ಲಿ ಆಯೋಜನೆ ಮಾಡಬೇಕು. ಕಲ್ಯಾಣ ಕರ್ನಾಟಕ ಎಂದಾಗ ಕಲಬುರಗಿಯಲ್ಲಿ ಕಾರ್ಯಕ್ರಮ ಮಾಡಬೇಕೆಂಬ ತೀರ್ಮಾನ ಮಾಡಿದ್ದೇವೆ. ಇನ್ನು ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಎಲ್ಲರೂ ಒಮ್ಮತದಿಂದ, ಒಗ್ಗಟ್ಟಿನಿಂದ ಆಚರಣೆ ಮಾಡಿದ್ದೇವೆ.ಅದಕ್ಕಾಗಿ ಬೆಳಗಾವಿಯ ಎಲ್ಲ ಕನ್ನಡ ಸಂಘಟನೆಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ  ಎಂದು ನಾರಾಯಣಗೌಡ ತಿಳಿಸಿದರು.

ಕರ್ನಾಟಕ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರು ಸಭೆ ಮಾಡಿದ್ದಾರೆ. ಇಲ್ಲಿ ಹಾಗೂ ಅಲ್ಲಿ ಇರುವ ಪುಣ್ಯ ಕ್ಷೇತ್ರದಲ್ಲಿ ಅವರು ಅಲ್ಲಿ ಕನ್ನಡ ಹಾಗೂ ಇಲ್ಲಿ ಮರಾಠಿ ಬಳಸಬೇಕು ಎಂದು ಸಭೆಯಲ್ಲಿ ತಿರ್ಮಾನ ಮಾಡಿದ್ದಾರೆ. ಸರಕಾರ ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತದೆ ನೋಡೋಣ. ನಾವು ಮಾತ್ರ  ಮರಾಠಿ ಬಳಸಿದರೆ ಸಾಲದು ಅವರು ಅಲ್ಲಿ ಕನ್ನಡ ಬಳಕೆ ಮಾಡಬೇಕು ಎಂದು ನಾರಾಯಣಗೌಡ ಆಗ್ರಹಿಸಿದರು.

ಕನ್ನಡ ಪರ ಸಂಘಟನೆಗಳಿಗೆ ಬೆಳಗಾವಿಯಲ್ಲಿ ಸರ್ಕಾರ ಅನುದಾನ ನೀಡದ ವಿಚಾರಕ್ಕೆ ಮಹಾರಾಷ್ಟ್ರ ಸರ್ಕಾರ ಎಂಇಎಸ್‍ಗೆ ಕೋಟ್ಯಾಂತರ ರೂಪಾಯಿ ಅನುದಾನ ನೀಡುವಾಗ ಇಲ್ಲಿ ನಮ್ಮವರಗೆ ಅನುದಾನ ಯಾಕೆ ನೀಡಿಲ್ಲ ಎಂದು ಪ್ರಶ್ನಿಸಿದರು.

ಬೆಳಗಾವಿಯಲ್ಲಿ ರಾಜ್ಯೋತ್ಸವ ಸಮಯದಲ್ಲಿ ನಿರ್ಭಂಧ ಹೇರಿರುವ ವಿಚಾರಕ್ಕೆ ಅದಕ್ಕೆ ಸ್ಥಳೀಯ ನಾಯಕರು ಉತ್ತರ ನೀಡಬೇಕು. ಕನ್ನಡಗರ ಸಂಭ್ರಮಕ್ಕೆ ಯಾರು ಅಡ್ಡಿ ಆಗಬಾರದು, ಕನ್ನಡಿಗರ ಮೇಲೆ ಲಾಠಿ ಚಾರ್ಜ್ ಮಾಡಿರುವುದು ಖಂಡನೀಯ, ಈ ವಿವಾರವಾಗಿ ಗೃಹ ಸಚಿವರ ಬಳಿ ಚರ್ಚೆ ಮಾಡುತ್ತೇವೆ, ನಮ್ಮ ರಾಜಕಾರಣಿಗಳು ರಣಹೇಡಿಗಳು, ಎಲ್ಲವನ್ನು ನಾವೇ ಒತ್ತಾಯ ಮಾಡಬೇಕು, ಕಾರ್ಯಕ್ರಮಕ್ಕೆ ಬರಲು ಮನೆಗೆ ಹೊಗಿ ಆಹ್ವಾನ ನೀಡಿದರು ಅವರು ಬರುವುದಿಲ್ಲ ಎಂದು ನಾರಾಯಣಗೌಡ ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಕರವೇ ರಾಜ್ಯ ಸಂಚಾಲಕ ಮಹಾದೇವ ತಳವಾರ, ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಮುಖಂಡರಾದ ಮಹೇಶ ಹಟ್ಟಿಹೊಳಿ, ರುದ್ರಗೌಡ ಪಾಟೀಲ, ರಮೇಶ ಯರಗಣ್ಣವರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

TV24 News Desk
the authorTV24 News Desk

Leave a Reply