ಬೆಳಗಾವಿ ತಹಸೀಲ್ದಾರ್ ಕಚೇರಿಯಲ್ಲಿ ಎಸ್ಡಿಎ ರುದ್ರಣ್ಣ ಹೆಡ್ಡವನ್ನವರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳಿಗೆ ನಿರೀಕ್ಷಣ ಜಾಮೀನು ಮಂಜೂರಾಗಿದೆ. ಬೆಳಗಾವಿ ಹತ್ತನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಪ್ತ ಸಹಾಯಕ ಸೋಮು ದೊಡ್ಡವಾಡಿ ತಹಸಿಲ್ದಾರ್ ಬಸವರಾಜ್ ನಾಗರಾಳ ತಹಸಿಲ್ದಾರ್ ಕಚೇರಿಯ ಎಫ್ ಡಿ ಎ ಅಶೋಕ್ ಕಬ್ಬಲಿಗೆರಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.
ನವೆಂಬರ್ ಐದರಂದು ತಹಸಿಲ್ದಾರ್ ಕಚೇರಿಯ ಕೊಟ್ಟಡಿಯಲ್ಲಿಯೇ ನೇಣು ಬಿಗಿದುಕೊಂಡು ಎಸ್ ಡಿ ಎ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾಯುವ ಮುನ್ನ ಮೂವರು ಹೆಸರು ಮೊಬೈಲ್ ನಲ್ಲಿ ವಾಟ್ಸಪ್ ಮೂಲಕ ಸಂದೇಶ ಕಳುಹಿಸಿದ್ದರು. ಈ ಬಗ್ಗೆ ಮೂವರ ವಿರುದ್ಧ ಕಡೆ ಬಜಾರ್ ಠಾಣೆಯಲ್ಲಿ ದೂರು ದಾಖಲಾಗಿತ್ತು.