ಬೆಳಗಾವಿ:
ಬೆಳಗಾವಿಯ ದರ್ಬಾರ್ ಗಲ್ಲಿಯಲ್ಲಿ ಔರಂಗಜೇಬ ಫೋಟೊ ಪ್ರದರ್ಶನದ ವಿರುದ್ಧ ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕೂಡಲೇ ಔರಂಗಜೇಬ್ ಫೋಟೊವನ್ನು ತೆರವು ಮಾಡುವಂತೆ ಒತ್ತಾಯಿಸಿದರು.ದರ್ಬಾರ್ ಗಲ್ಲಿಯಲ್ಲಿ ಔರಂಗಜೇಬ್ ಬ್ಯಾನರ್ ಅಳವಡಿಕೆಯ ಕುರಿತು ನಗರ ಪೊಲೀಸ್ ಆಯುಕ್ತರ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸಂಭಾಜಿ ಮಹಾರಾಜರನ್ನು ಹಿಂಸಿಸಿದ ಔರಂಗಜೇಬ್ ಫೋಟೊವನ್ನು ಅಲ್ಲಿಂದ ತೆರವು ಮಾಡಬೇಕು ಎಂದು ಮನವಿ ಮಾಡಿದರು. ಔರಂಗಜೇಬ್ ನನ್ನು ಭಾರತದ ಕಿಂಗ್ ಎನ್ನುವ ರೀತಿಯಲ್ಲಿ ಬಿಂಬಿಸಲಾಗುತ್ತಿದೆ.ಬಾಬ್ರಿ ಮಸೀದಿಯನ್ನೆ ಕಿತ್ತು ಹಾಕಿದವರಿಗೆ ಔರಂಗಜೇಬನ ಫೋಟೊ ಕಿತ್ತು ಎಸೆಯುವುದು ದೊಡ್ದದಲ್ಲ ಎಂದು ಕಾರ್ಯಕರ್ತರು ಆಕ್ರೋಶ ಹೊರ ಹಾಕಿದರು. ಅಲ್ಲದೇ ಅನ್ಯ ಕೋಮಿನ ಯುವಕ ಪಾಂಗುಳ ಗಲ್ಲಿಯಲ್ಲಿರುವ ಅಶ್ವತ್ಥಾಮ ದೇವಸ್ಥಾನಕ್ಕೆ ಕಲ್ಲು ಎಸೆದಿದ್ದು ಆತನ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದರು. ಬೆಳಗಾವಿ ಪೊಲೀಸರು ಇಂತಹ ಘಟನೆಗಳಿಗೆ ಬ್ರೇಕ್ ಹಾಕುವಂತೆ ಕಾರ್ಯಕರ್ತರು ಮನವಿ ಮಾಡಿಕೊಂಡರು. ಇನ್ನು ಇದೇ ವೇಳೆ ಮಾತನಾಡಿದ ಭಜರಂಗದಳದ ಮುಖಂಡ ಸುನೀಲ್ ಗುರನ್ನವರ್ ಹಿಂದೂ ವಿರೋಧಿ ಕೃತ್ಯಗಳನ್ನು ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳ ಸಹಿಸುವುದಿಲ್ಲ ಎಂದು ಕಿಡಿಕಾರಿದರು.