
ಬೆಳಗಾವಿ: ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಳಗಾವಿಯಲ್ಲಿ ನೀರಸ ಪ್ರತಿಕ್ರಿಯೇ ವ್ಯಕ್ತವಾಯಿತು. ಎಂದಿನಂತೆ ಆಟೋ,ನಗರ ಸಂಚಾರ ಸೇರಿದಂತೆ ಎಲ್ಲಾ ವಾಹನ ಸಂಚಾರ ಎಂದಿನಂತೆ ಇತ್ತು. ಇನ್ನು ಬೆಳ್ಳಂ ಬೆಳಗ್ಗೆಯೇ ನಗರದ ಬಸ್ ನಿಲ್ದಾಣದ ಬಳಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಹಾಗೂ ರೈತ ಸಂಘಟನೆಯ ಪದಾಧಿಕಾರಿಗಳು ಮುಖಂಡರು ಜಮಾವಣೆಯಾಗಿ ಪ್ರತಿಭಟನೆ ಪ್ರಾರಂಭಿಸಿದರು. ಬಸ್ ನಿಲ್ದಾಣದಿಂದ ಹೊರಟ ಪ್ರತಿಭಟನಾ ಮೆರವಣೆಗೆ ನಗರದ ಅಶೋಕ ವೃತ್ತವನ್ನು ಬಳಿಸಿಕೊಂಡು ಡಿಸಿ ಕಚೇರಿಯಿಂದ ಚನ್ನಮ್ಮ ವೃತ್ತ ತಲುಪಿತು. ಚನ್ನಮ್ಮ ವೃತ್ತದಲ್ಲಿ ಕರವೇ ಕಸರ್ಯಕರ್ತರು ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಎಂ ಇ ಎಸ್ ಬ್ಯಾನ್ ಮಾಡಬೇಕು ಹಾಗೂ ಮರಾಠಿ ಪುಂಡರ ಪುಂಡಾಟಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಬೇಕು ಎಂದು ಘೋಷಣೆ ಕೂಗಿ ರಾಜ್ಯ ಸರ್ಕಾರ ವಿರುದ್ಧ ಬೊಬ್ಬೆ ಹಾಕಿ ಪ್ರತಿಭಟಿಸಿದರು. ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ನಂತರ ನಡು ರಸ್ತೆಯಲ್ಲಿಯೇ ಮಲಗಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಕರವೇ ಕಾರ್ಯಕರ್ತರು ಹಾಗೂ ಕನ್ನಡಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಕಾರ್ಯಕರ್ತರು ಪೊಲೀಸರ ವಿರುದ್ಧವೂ ಆಕ್ರೋಶ ಹೊರ ಹಾಕಿದರು. ಇನ್ನು ಮುಂಜಾಗೃತಾ ಕ್ರಮವಾಗಿ ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ ಪೊಲೀಸರು ಮಾಡಿಕೊಂಡಿದ್ದು ಒಟ್ಟಾರೆಯಾಗಿ ಬೆಳಗಾವಿಯಲ್ಲಿ ಬಂದ್ ನ ಬಿಸಿ ಅಷ್ಟೇನು ಕಂಡು ಬಂದಿಲ್ಲ