
ಬೆಳಗಾವಿ
ರಾಜ್ಯ ಸರಕಾರದ ಬಜೆಟ್ ಹಾಗೂ 18 ಬಿಜೆಪಿ ಶಾಸಕರ ಅಮಾನತ್ತು ಖಂಡಿಸಿ ಸೋಮವಾರ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು ಸುಮಾರು 8ಕ್ಕೂ ಅಧಿಕಾರ ಕಾರ್ಯಕರ್ತರನ್ನು ಮಾರ್ಕೇಟ್ ಪೊಲೀಸರು ವಶಕ್ಕೆ ಪಡೆದ ಘಟನೆ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಬಳಿ ನಡೆದಿದೆ.
ರಾಜ್ಯ ಸರಕಾರ ಬಜೆಟ್ ಮಂಡಿಸಿದ್ದು ಹಿಂದು ವಿರೋಧಿ ಬಜೆಟ್ ಹಾಗೂ ದಲಿತರ ಅನುದಾನವನ್ನು ತನ್ನ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಜಿಲ್ಲಾಧಿಕಾರಿ ಕಚೇರಿ ಎದುರು ಅಳವಡಿಸಲಾದ ಗ್ಯಾರಂಟಿ ಯೋಜನೆಯ ಬ್ಯಾನರ್ ಹರಿದು ಆಕ್ರೋಶ ವ್ಯಕ್ತಪಡಿಸುತ್ತಿದ್ದ ವೇಳೆ ಪೊಲೀಸರು ಆಗಮಿಸಿ ತಡೆದ ಪರಿಣಾಮ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
ಇದೇ ಸಂದರ್ಭದಲ್ಲಿ ಪೊಲೀಸರಿಗೆ ತಳ್ಳಾಟ ನೂಕಾಟ ನಡೆಸಿದ ಸುಮಾರು 8 ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನು ಮಾರ್ಕೆಟ್ ಪೊಲೀಸರು ವಶಕ್ಕೆ ಪಡೆದುಕೊಂಡರು.