
ಬೆಳಗಾವಿ:
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಫೇಲಾಗುವ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲನಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು ದೀಪಿಕಾ ರಾಜೇಂದ್ರ ಬಡಿಗೇರ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ದೀಪಿಕಾ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಇಂದು ಎರಡನೇ ವಿಷಯದ ಪರೀಕ್ಷೆಯನ್ನು ವಿದ್ಯಾರ್ಥಿನಿ ಬರೆದು ಬಂದಿದ್ದಳು ಎನ್ನಲಾಗಿದೆ.ಸಂಜೆ ಮನೆಗೆ ವಾಪಸ್ ಕುಟುಂಬಸ್ಥರು ಬಂದಾಗ ಘಟನೆ ಬೆಳಕಿಗೆ ಬಂದಿದ್ದು ವಿದ್ಯಾರ್ಥಿನಿಯ ಸಾವಿನಿಂದ ಪೋಷಕರ ಆಕ್ರಂದಣ ಮುಗಿಲು ಮುಟ್ಟಿದೆ. ಇನ್ನು ಘಟನಾ ಸ್ಥಳಕ್ಕೆ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.