ತ್ರಿಚಕ್ರ ವಾಹನ ಅಪಘಾತದಲ್ಲಿ ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಬೈಲಹೊಂಗಲ ತಾಲೂಕಿನ ಮರಿಕಟ್ಟಿ ಗ್ರಾಮದ ವ್ಯಾಪ್ತಿಯ ಹಿರೇಬಾಗೇವಾಡಿ- ಮೋದಗಾ ರಸ್ತೆಯಲ್ಲಿ ಭಾನುವಾರ ನಡೆದಿದೆ .
ಬೈಲಹೊಂಗಲ ತಾಲೂಕಿನ ನಾವಲಗಟ್ಟಿ ಗ್ರಾಮದ ಗಣಪತಿ ಮುರಗೋಡ (೪೦) ಮೃತಪಟ್ಟಿದ್ದಾನೆ. ಹುಟ್ಟುತ್ತಲೇ ಅಂಗವೈಕಲ್ಯ ಹೊಂದಿರುವ ಗಣಪತಿಗೆ ಸರ್ಕಾರದಿಂದ ತ್ರಿಚಕ್ರ ವಾಹನ ನೀಡಲಾಗಿತ್ತು. ಈ ವಾಹನದ ಮೂಲಕ ನಾವಲಗಟ್ಟಿ ಗ್ರಾಮದಿಂದ ಮೋದಗಾ ಗ್ರಾಮದ ಕಡೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಇದರ ಪರಿಣಾಮ ಗಣೇಶ ಮುರಗೋಡ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಘಟನೆ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.