
ಬೆಳಗಾವಿ:
ರೈತರ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷಾವಾಗಿದ್ದರಿಂದ ರೈತರಲ್ಲಿ ಆತಂಕ ಶುರುವಾಗಿದೆ.ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಪಗಾಂವ್ ಗ್ರಾಮದ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.ಸಂಪಗಾಂವ್ ಹಾಗೂ ಪಟ್ಟಿಹಾಳ ಕೆ ಎಸ್ ಗ್ರಾಮದ ಹೊರವಲಯದಲ್ಲಿ ಚಿರತೆಯು ನರಿ ಬೇಟಿಯಾಡಿದೆ. ಚಿರತೆ ಪ್ರತ್ಯಕ್ಷವಾಗಿರುವ ಹಿನ್ನೆಲೆಯ ಅರಣ್ಯ ಇಲಾಖೆ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಚಿರತೆಯ ಚಲನವಲನ ಸೆರೆ ಹಿಡಿಯಲು ಕ್ಯಾಮರಾ ಇಟ್ಟಿದ್ದರು. ಆ ಕ್ಯಾಮರಾದಲ್ಲಿ ಚಿರತೆಯ ಚಲನವಲನ ಸೆರೆಯಾಗಿದೆ. ಹೀಗಾಗಿ ರೈತರಿಗೆ ಚಿರತೆ ಸೆರೆಯಾಗುವವರೆಗೂ ರಾತ್ರಿ ಹೊತ್ತು ಜಮೀನಿನಲ್ಲಿ ಯಾರೂ ಹೋಗದಂತೆ ಅರಣ್ಯ ಇಕಾಖೆಯ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ.
