ಬೆಳಗಾವಿ: ಬೆಳಗಾವಿ ನಗರದಲ್ಲಿರೋ ಧಾರವಾಡ ಕರ್ನಾಟಕ ನೀರಾವರಿ ನಿಗಮದ ಮುಖ್ಯ ಇಂಜಿನೀಯರ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ಬೆಳಗಾವಿಯ ರಾಮತೀರ್ಥ ನಗರದಲ್ಲಿರೋ ಮನೆ ಹಾಗೂ ಧಾರವಾಡ ಕಚೇರಿಯ ಮೇಲೆ ಏಕಕಾಲಕ್ಕೆ ಧಾರವಾಡ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಧಾರವಾಡದ ಕರ್ನಾಟಕ ನೀರಾವರಿ ನಿಗಮದ ಮುಖ್ಯ ಇಂಜಿನೀಯರ ಅಶೋಕ್ ವಸಂದ್ ಮನೆ ಹಾಗೂ ಕಚೇರಿಯ ಮೇಲೆ ದಾಳಿ ನಡೆದಿದ್ದು ದಾಳಿ ವೇಳೆ ಅಶೋಕ್ ಮನೆಯಲ್ಲಿ ಒಂದುವರೆ ಲಕ್ಷ ರೂ ಹಾಗೂ ಚಿನ್ನಾಭರಣ ಪತ್ತೆಯಾಗಿದೆ ಎನ್ನಲಾಗಿದೆ.ಎರಡೂ ಕಡೆ ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳು ಆಸ್ತಿಪಾಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
tv24plus.in > Blog > ಜಿಲ್ಲೆ > ಬೆಳಗಾವಿ > ಕರ್ನಾಟಕ ನೀರಾವರಿ ನಿಗಮದ ಮುಖ್ಯ ಇಂಜಿನೀಯರ ಮನೆ ಮೇಲೆ ಲೋಕಾ ರೇಡ್