ಬೆಳಗಾವಿ:
ಮಹಾರಾಷ್ಟ್ರದ ಪಶ್ಚಿಮ ಘಟ್ಟಪ್ರದೇಶಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕರ್ನಾಟಕದತ್ತ ಹರಿದು ಬರುವ ಕೃಷ್ಣಾ ಮಲಪ್ರಭಾ ಘಟಪ್ರಭಾ ನದಿಗಳ ಒಳಹರಿವು ಹೆಚ್ಚಾಗಿದೆ ಸಧ್ಯ ಘಟಪ್ರಭಾ ನದಿಯ ಒಳಹರಿವಿನಲ್ಲಿ ಭಾರಿ ಪ್ರಮಾಣದ ಏರಿಕೆಯಾಗಿದ್ದು ಒಂದೇ ವಾರದಲ್ಲಿ ಹುಕ್ಕೇರಿ ತಾಲೂಕಿನ ಹಿನ್ನೀರಿನಲ್ಲಿದ್ದ ವಿಠ್ಠಲ ದೇವಸ್ಥಾನ ಮುಳುಗಡೆಯಾಗಿದೆ. ಸಧ್ಯ ವಿಠ್ಠಲ ದೇವಸ್ಥಾನದ ಗೋಪುರದ ಕಲಶ ಮಾತ್ರ ಗೋಚರಿಸುತ್ತಿದ್ದು ಸಧ್ಯ ಹಿಡಕಲ್ ಜಲಾಶಯಕ್ಕೆ 30 ಸಾವಿರ ಕ್ಯೂಸೇಕ್ ಗೂ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ.51 ಟಿಎಂಸಿ ಸಾಮರ್ಥ್ಯದ ಜಲಾಶಯ ಸಧ್ಯ 22 ಟಿಎಂಸಿ ಭರ್ತಿಯಾಗಿದ್ದು ಜಲಾಶಯ ಸಂಪೂರ್ಣ ಭರ್ತಿಯಾದರೆ ಬೆಳಗಾವಿ, ಬಾಗಲಕೋಟೆ ಮತ್ತು ಧಾರವಾಡ ಮೂರು ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ.

