ಬೆಳಗಾವಿ:
ಗಡಿಭಾಗದ ಕನ್ನಡ ಸಂಘಟನೆಗಳ ದೀರ್ಘ
ಕಾಲದ ಬೇಡಿಕೆಯಾಗಿದ್ದ ಗಡಿ ಉಸ್ತುವಾರಿ
ಸಚಿವರ ನೇಮಕವಾಗಿದ್ದು ರಾಜ್ಯ ಸರ್ಕಾರ ಅಧಿಕೃತವಾಗಿ ಗಡಿ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಹಿರಿಯ ಸಚಿವ ಶ್ರೀ ಎಚ್.ಕೆ.ಪಾಟೀಲ
ಅವರನ್ನು ಗಡಿ ಹಾಗೂ ಜಲ ವಿವಾದಗಳ
ಉಸ್ತುವಾರಿ ಸಚಿವರನ್ನಾಗಿ ನೇಮಿಸಿ
ಇಂದು ಆದೇಶ ಹೊರಡಿಸಲಾಗಿದೆ.
2013 ರಲ್ಲಿ ಸಿದ್ದರಾಮಯ್ಯ ಅವರ ಸರಕಾರ ಅಧಿಕಾರಕ್ಕೆ ಬಂದ ನಂತರ ಎಚ್.ಕೆ.ಪಾಟೀಲ ಅವರನ್ನು
ಗಡಿ ಉಸ್ತುವಾರಿ ಸಚಿವರನ್ನಾಗಿ ನೇಮಿಸಲಾಗಿತ್ತು.2018 ರ ನಂತರ ಅಧಿಕಾರಕ್ಕೆ ಬಂದ ಯಾವದೇ ಸರಕಾರ
ಗಡಿ ಉಸ್ತುವಾರಿ ಸಚಿವರನ್ನು ನೇಮಿಸಿರಲಿಲ್ಲ.
ಮಹಾರಾಷ್ಟ್ರ ಸರಕಾರವು ಗಡಿವಿವಾದ ಸಂಬಂಧ ಇಬ್ಬರೂ ಉಸ್ತುವಾರಿ ಸಚಿವರನ್ನು ಇತ್ತೀಚೆಗೆ ನೇಮಿಸಿತ್ತು. ಇದರ ಬೆನ್ನಲ್ಲೆ ಕರ್ನಾಟಕ ಸರ್ಕಾರವೂ ಸಹ ಅನುಭವಿ ಹಾಗೂ ಹಿರಿಯ ರಾಜಕಾರಣಿ ಹೆಚ್ ಕೆ ಪಾಟೀಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಇಂದಿನ ನೇಮಕ ಆದೇಶಕ್ಕಾಗಿ
ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ
ಕ್ರಿಯಾ ಸಮಿತಿಯು ಮುಖ್ಯಮಂತ್ರಿ
ಸಿದ್ದರಾಮಯ್ಯ ಮತ್ತು ಎಚ್.ಕೆ.
ಪಾಟೀಲರನ್ನು ಅಭಿನಂದಿಸಿದೆ.ಈ ಕುರಿತು ಹೇಳಿಕೆ ನೀಡಿದ
ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ
ಚಂದರಗಿ ಅವರು ಶೀಘ್ರವೇ ಗಡಿ
ಉಸ್ತುವಾರಿ ಸಚಿವರು ಬೆಳಗಾವಿಗೆ
ಭೇಟಿ ನೀಡಬೇಕೆಂದು ಕೋರಿದ್ದಾರೆ.

