ಬೆಳಗಾವಿ: ತಮ್ಮ ಹೇಳಿಕೆ ಹಿಂಪಡೆಯಲ್ಲ ಈ ವಿಚಾರದಲ್ಲಿ ಕಾಂಗ್ರೆಸ್ಗೆ ಸ್ಪಷ್ಟತೆ ಇದ್ದರೆ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಬೆಳಗಾವಿ ಜಿಲ್ಲೆಯ ರಾಯಬಾಗ ನಗರದಲ್ಲಿ ಆಯೋಜಿಸಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು ಸತೀಶ್ ಹೇಳಿಕೆ ಕಾಂಗ್ರೆಸ್ ತನ್ನ ಸ್ಪಷ್ಟನೆ ನೀಡಲಿ.
ಒಂದು ನೂರು ವರ್ಷದ ಹಳೆ ಪಕ್ಷ ಬಹುಸಂಖ್ಯಾತರ ಭಾವನೆಗಳಿಗೆ ಧಕ್ಕೆ ಬರುವ ಹಾಗೆ ಇವರು ನಡೆದುಕೊಳ್ಳುತ್ತಾರೆ. ಭಾರತವನ್ನು ಗೊಂದಲದಲ್ಲಿಟ್ಟು ಆಳಬೇಕು ಎನ್ನುವುದು ಮೂಲ ಸಿದ್ದಾಂತ ಮತ್ತೊಮ್ಮೆ ಪ್ರಕಟವಾಗಿದೆ. ರಾಹುಲ್ ದೇವಸ್ಥಾನಕ್ಕೆ ಹೋಗುತ್ತಾರೆ. ಇನ್ನೊಂದು ಕಡೆ ಈ ರೀತಿಯ ಹೇಳಿಕೆಗಳು ಬಂದಾಗ ಸುಮ್ಮನಿರುತ್ತಾರೆ. ಸಾರ್ವಜನಿಕ ಜೀವನದಲ್ಲಿ ನಾವು ಅರಿವಿನಿಂದ ನಡೆಯಬೇಕು. ಸತೀಶ್ ಜಾರಕಿಹೊಳಿ ಹಿಂದೂ ಪದದ ಕುರಿತು ಚರ್ಚೆಗೆ ಆಹ್ವಾನ ವಿಚಾರ, ಅವರ ಆಧಾರಗಳೇ ಅತ್ಯಂತ ಅಸಂಗತ್ಯವಾದದಂತ ಆಧಾರ. ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲದಿದ್ದರೆ ಮುಂದೆ ಅನುಭವಿಸುತ್ತಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಜನಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಸಾಗರೋಪಾದಿಯಲ್ಲಿ ಜನ ಹರಿದು ಬಂದಿದ್ದು, ಸಿದ್ದರಾಮಯ್ಯಗೆ ಇಲ್ಲಿ ಸೇರಿರುವ ಜನಸಾಗರವನ್ನು ತೋರಿಸಿ. ಜನಸಂಕಲ್ಪ ಸಮಾವೇಶದಲ್ಲಿನ ಜನಸಾಗರದ ಬಗ್ಗೆ ತಿಳಿದುಕೊಳ್ಳಲಿ. ಜನ ಸೇರಲ್ಲ ಎಂದಿದ್ದ ಸಿದ್ದರಾಮಯ್ಯಗೆ ಸಿಎಂ ಬೊಮ್ಮಾಯಿ ಟಾಂಗ್ ನೀಡಿದರು.