ಬೆಳಗಾವಿ: ಇದೇ ರವಿವಾರ ನವೆಂಬರ ೧೩ ರಂದು ಗೋಕಾಕ ನಗರದ ನ್ಯೂ ಇಂಗ್ಲಿಷ್ ಶಾಲಾ ಮೈದಾನದಲ್ಲಿ ಲಿಂಗಾಯತ ಪಂಚಮಸಾಲಿ ಸಮಾವೇಶವನ್ನು ಏರ್ಪಡಿಸಲಾಗಿದೆ. ಎಂದು ಕೂಡಲ ಸಂಗಮ ಪೀಠದ ಜಯಮೃತ್ಯಂಜಯ ಸ್ವಾಮೀಜಿ ಹೇಳಿದರು.
ಇಂದು ನಗರದ ಗಾಂಧಿಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿಯನ್ನು ನೀಡಬೇಕು, ಸರಕಾರದ ವಿಳಂಬನೀತಿ, ಸರಕಾರ ಭರವಸೆ ನೀಡಿ ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸರಕಾರ ನಾಲ್ಕು ಬಾರಿ ಭರವಸೆ ನೀಡಿ ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಗೋಕಾಕ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಂಚಮಸಾಲಿ ಸಮಾಜದ ಜನರು ಇದ್ದಾರೆ. ಗೋಕಾಕ ಭಾಗದ ಪಂಚಮಸಾಲಿ ಸಮಾಜದ ಜನರೇ ಬೃಹತ ಸಮಾವೇಶವನ್ನು ಆಯೋಜಿಸಿದ್ದಾರೆ ಎಂದು ಹೇಳಿದರು.