ಬೆಳಗಾವಿ:
ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಮಗ ಸಾವನ್ನಪ್ಪಿರುವ ಘಟನೆ
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ನಡೆದಿದೆ.ತಂದೆ ಬಸವರಾಜ್ ಕೆಂಗೇರಿ(40), ಮಗ ಧರೆಪ್ಪ ಕೆಂಗೇರಿ(14) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಬಸವರಾಜ್ ಕೆಂಗೇರಿ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ನಿವಾಸಿಯಾಗಿದ್ದು ಹೆಂಡತಿ ಊರಲ್ಲಿರುವ ಜಮೀನಿಗೆ ಕೀಟನಾಶಕ ಹೊಡೆಯಲು ಬಸವರಾಜ್ ಹೋಗಿದ್ದ ಎನ್ನಲಾಗಿದೆ.ಈ ವೇಳೆ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಕಾಲು ಜಾರಿ ಬಿದ್ದ ಮಗ ಧರೆಪ್ಪ ಮತ್ತೋರ್ವ ಬಾಲಕ ಬಾಗಪ್ಪ ಸಣ್ಣಕ್ಕಿಯನ್ನು ರಕ್ಷಣೆ ಮಾಡಲು ಬಸವರಾಜ್ ಕೆಂಗೇರಿ ದಾವಿಸಿದ್ದ ಎನ್ನಲಾಗಿದೆ.ಈ ವೇಳೆ ಬಸವರಾಜ್ ಬಾಗಪ್ಪನನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದು ತನ್ನ ಮಗ ಧರೆಪ್ಪನನ್ನು ಉಳಿಸಿಕೊಳ್ಳಲು ಬಸವರಾಜ್ ಗೆ ಆಗಿಲ್ಲ, ಆತನನ್ನು ಕಾಪಾಡಲು ಹೋಗಿ ತಾನೂ ಸಹ ಕೃಷಿ ಹೊಂಡದಲ್ಲಿ ಮುಳುಗಿ ಬಸವರಾಜ್ ಸಾವನ್ನಪ್ಪಿದ್ದಾರೆ. ಸಧ್ಯ ಗಂಭೀರ ಸ್ಥಿತಿಯಲ್ಲಿರುವ ಬಾಲಕ ಬಾಗಪ್ಪಗೆ ಬೈಲಹೊಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಸ್ಥಳಕ್ಕೆ ಮುರಗೋಡ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು
ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

