ಹುಬ್ಬಳ್ಳಿ : ಇಂದು ನಗರದ ಈದ್ಗಾ ಮೈದಾನದಲ್ಲಿ ಕನನ ಜಯಂತಿಯನ್ನು ಶ್ರೀರಾಮ ಸೇನೆ ವತಿಯಿಂದ ಆಚರಣೆ ಮಾಡಲಾಯಿತು.ಹಲವು ಹಿಂದೂ ಸಂಘಟನೆಗಳ ವಿರೋಧದ ನಡುವೆಯೂ ಪಾಲಿಕೆಯ ಷರತ್ತುಬದ್ಧ ಅನುಮತಿ ಮೇರೆಗೆ ಟಿಪ್ಪು ಜಯಂತಿಯನ್ನು ಸರಳವಾಗಿ ಆಚರಿಸಲು ಅವಕಾಶ ನೀಡಿತ್ತು, ಶ್ರೀರಾಮ ಸೇನೆ ವತಿಯಿಂದ ಎಲ್ಲರಂತೆ ನಮಗೂ ಅವಕಾಶ ನೀಡಿ ಎಂದು ಕನಕ ಜಯಂತಿ ಆಚರಣೆ ಮಾಡಲು ಅವಕಾಶ ನೀಡುವಂತೆ ಮನವಿ ಕೂಡ ಸಲ್ಲಿಸಲಾಗಿತ್ತು. ಅದರಂತೆ ಇಂದು ಕನಕದಾಸ ಜಯಂತಿ ಆಚರಣೆಯಲ್ಲಿ ಶ್ರೀರಾಮ ಸೇನೆ ಸೇರಿದಂತೆ ಕೇಲ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಈದ್ಗಾ ಮೈದಾನದಲ್ಲಿ ಶ್ರೀ ರಾಮ್ ಸೇನೆ ಕಾರ್ಯಕರ್ತರು ಪೆಂಡಾಲ್ ಹಾಕಿ ಕನಕದಾಸರ ಜಯಂತಿ ಮಾಡಿದರು.
ಶ್ರೀ ರಾಮ್ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಕನಕದಾಸ ಜಯಂತಿ ಆಚರಣೆ ಮಾಡಲಾಯಿತು.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಬೆಳಿಗ್ಗೆ 9 ರಿಂದ 11 ಗಂಟೆಗೆ ಕನಕದಾಸ ಜಯಂತಿ ಆಚರಣೆಗೆ ಅವಕಾಶ ನೀಡಲಾಗಿತ್ತು. ಕೊನೆಯ ಗಳಿಗೆಯಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಮುತಾಲಿಕ್ ಆಗಮಿಸಿ ಕನಕ ಜಯಂತಿಯಲ್ಲಿ ಭಾಗವಹಿಸಿದ್ದರು.
ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ಮಾಡಿದ ಹಿನ್ನೆಲೆಯಲ್ಲಿ ಈದ್ಗಾ ಮೈದಾನವನ್ನು ಶ್ರೀ ರಾಮ್ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಶುಚಿಗೊಳಿಸಿದರು. ಗೋಮೂತ್ರ ಸಿಂಪಡಿಸುವ ಮೂಲಕ ಈದ್ಗಾ ಮೈದಾನ ಶುಚಿಗೊಳಿಸಿದರು.