ಗೋಕಾಕ: ನಗರದ ಪ್ರಥಮ ದರ್ಜೆ ಗುತ್ತಿಗೆದಾರನ ಮನೆಯಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ ಆಗಿರವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ನ ಲಕ್ಷ್ಮೀ ನಗರದಲ್ಲಿ ನಡೆದಿದೆ.
ಪ್ರಥಮ ದರ್ಜೆ ಗುತ್ತಿಗೆದಾರ ಪ್ರಕಾಶ್ ತೊಳಿನವರ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. ಯಾರು ಇಲ್ಲದ ವೇಳೆ ಮನೆಯ ಬೀಗ ಒಡೆದು ಖದೀಮರು ಕಳ್ಳತನ ಮಾಡಿದ್ದಾರೆ.
ಮನೆಯಲ್ಲಿದ್ದ 30 ಲಕ್ಷ ನಗದು, 130 ಗ್ರಾಂ. ಚಿನ್ನ, 10 ಕೆಜಿ ಬೆಳ್ಳಿ ಕಳ್ಳತನವಾಗಿದೆ. ಗುತ್ತಿಗೆದಾರ ಪ್ರಕಾಶ್ ಅವರು ಕುಟುಂಬ ಸಮೇತ ಬದಾಮಿ ಬನಶಂಕರಿ ದರ್ಶನ ಪಡೆಯಲು ಹೋಗಿದ್ದರು. ರಾತ್ರಿ ಮನೆಗೆ ಬಂದೂ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಗೋಕಾಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.