ಗೋಕಾಕ : ಗೋಕಾಕ ನಗರದಲ್ಲಿ ಇಂದು ಜರುಗಿದ ಬೆಳಗಾವಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ದ ಕಾರ್ಯಕಾರಿಣಿ ಮಂಡಳಿ ಸಭೆ ಹಾಗೂ ಕರ್ನಾಟಕ ರಾಜ್ಯ ಚಾಂಪಿಯನ್ಶಿಪ್ಗೆ ಬೆಳಗಾವಿ ಜಿಲ್ಲಾ ಜೂನಿಯರ್ ಬಾಲಕರ ಕಬಡ್ಡಿ ತಂಡದ ಬೀಳ್ಕೊಡುವ ಸಮಾರಂಭ ಜರುಗಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಯುವ ಕಾಂಗ್ರೆಸ್ ನಾಯಕ ರಾಹುಲ್ ಜಾರಕಿಹೊಳಿ ಅವರು ಕರ್ನಾಟಕ ಕಬಡ್ಡಿ ಚಾಂಪಿಯನ್ಶಿಪ್ಗೆ ಆಯ್ಕೆಯಾದ ತಂಡದ ನೂತನ ಜರ್ಸಿಯನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿ ಗ್ರಾಮೀಣ ಪ್ರತಿಭೆಗಳನ್ನು ಗುರುತಿಸಿ ಕಬಡ್ಡಿಯನನ್ನು ಬೆಳೆಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಪ್ರಯತ್ನಕ್ಕೆ ಎಲ್ಲರ ಸಹಕಾರ ಮುಖ್ಯವಾಗಿದೆ ಎಂದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗಣ್ಯರು, ಹಿರಿಯರು, ಸಾರ್ವಜನಿಕರು ಉಪಸ್ಥಿತರಿದ್ದರು.
tv24plus.in > Blog > ಜಿಲ್ಲೆ > ಬೆಳಗಾವಿ > ಗ್ರಾಮೀಣ ಪ್ರತಿಭೆಗಳನ್ನು ಬೆಳೆಸಿ ; ರಾಹುಲ್ ಜಾರಕಿಹೊಳಿ