



ಬೆಳಗಾವಿ:
ಬೆಳಗಾವಿ ಮಹಾನಗರ ಪಾಲಿಕೆಯನ್ನು ಬೃಹತ್ ಬೆಳಗಾವಿ ಮಹಾನಗರ ಪಾಲಿಕೆಯನ್ನಾಗಿ ಘೋಷಣೆ ಮಾಡಿ ಎಂದು ನಗರಾಭಿವೃದ್ದಿ ಸಚಿವ ಡಾ, ಯತೀಂದ್ರ ಸಿದ್ದರಾಮಯ್ಉ ಅವರಿಗೆ ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಮುಖಂಡರು ಮನವಿ ಮಾಡಿದರು. ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಿದ ಕರವೇ ಕಾರ್ಯಕರ್ತರು ಮಂಗಳವಾರ ಮನವಿ ಮಾಡಿದರು. ಗಡಿನಾಡು ಗುಡಿ, ಬೆಳಗಾವಿ ಮಹಾನಗರ ನಾಲ್ಕು ದಿಕ್ಕುಗಳಲ್ಲಿ ದಿನದಿಂದ ದಿನಕ್ಕೆ ಅತ್ಯಂತ ವೇಗವಾಗಿ ಬೆಳೆಯುತ್ತಿದೆ.ಬೆಳಗಾವಿ ರಾಜ್ಯದ ಎರಡನೇಯ ರಾಜಧಾನಿಯಾಗುವ ಹೊಸ್ತಿಲಲ್ಲಿದೆ. ಹದಿನೈದು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಬೆಳಗಾವಿ ಮಹಾನಗರ ಮೆಟ್ರೋಪಾಲಿಟನ್ ನಗರವಾಗುವತ್ತ ದಾಪುಗಾಲು ಹಾಕುತ್ತಿದೆ. ಹೀಗಾಗಿ ಬೆಳಗಾವಿ ಮಹಾನಗರದ ಬೆಳವಣಿಗೆಗೆ ತಕ್ಕಂತೆ ಬೆಳಗಾವಿ ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೆ ಏರಿಸುವ ಅವಶ್ಯಕತೆ ಇದ್ದು ಸರ್ಕಾರ ಕೂಡಲೇ ಬೆಳಗಾವಿ ಮಹಾನಗರ ಪಾಲಿಕೆಯನ್ನು ಬೃಹತ್ ಬೆಳಗಾವಿ ಮಹಾನಗರ ಪಾಲಿಕೆ ಎಂದು ಘೋಷಣೆ ಮಾಡಬೇಕು ಎಂದು ಕರವೇ ಕಾರ್ಯಕರ್ತರು ತಮ್ಮ ನಿವೇದನೆಯನ್ನು ಸಚಿವರ ಮುಂದೆ ಇಟ್ಟರು. ಈ ವಿಚಾರದಲ್ಲಿ ನಗರಾಭಿವೃದ್ಧಿ ಇಲಾಖೆ ತ್ವರಿತಗತಿಯ ಕ್ರಮಗಳನ್ನು ಜರುಗಿಸಬೇಕು ಎಂದು ಕರ್ನಾಟಕ ರಕ್ಚಣಾ ವೇದಿಕೆ ಕಾರ್ಯಕರ್ತರು ಮನವಿ ಮಾಡಿದರು.
ಇನ್ನು ಬೆಳಗಾವಿ ಮಹಾನಗರಕ್ಕೆ ಹೊಂದಿಕೊಂಡಿರುವ ಸುಮಾರು 40 ಹಳ್ಳಿಗಳನ್ನು ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಸೇರಿಸುವ ಪ್ರಸ್ತಾವಣೆ ಇದೆ. ಈ ಪ್ರಸ್ತಾವಣೆ ಇನ್ನುವರೆಗೆ ಕಾರ್ಯರೂಪಕ್ಕೆ ಬಂದಿಲ್ಲ.ಬೆಳಗಾವಿ ಮಹಾನಗರಕ್ಕೆ ಹೊಂದಿಕೊಂಡಿರುವ ಗ್ರಾಮಗಳು ಅಭಿವೃದ್ಧಿಯಿಂದ ವಂಚಿತವಾಗಿವೆ.ನಗರಾಭಿವೃದ್ಧಿ ಇಲಾಖೆ ಕೂಡಲೇ ಬೆಳಗಾವಿ ಮಹಾನಗರಕ್ಕೆ ಹೊಂದಿಕೊಂಡಿರುವ ಸುಮಾರು 40 ಗ್ರಾಮಗಳನ್ನು ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಸೇರಿಸಿ ಬೃಹತ್ ಬೆಳಗಾವಿ ಮಹಾನಗರ ಪಾಲಿಕೆ ಎಂದು ಘೋಷಣೆ ಮಾಡಿದರೆ ಬೆಳಗಾವಿ ಮಹಾನಗರದ ಅಭಿವೃದ್ಧಿಗೆ ಪೂರಕವಾಗುತ್ತದೆ.ನಗರ ಹಾಗೂ ಗ್ರಾಮೀಣ ಪ್ರದೇಶಗಳ ನಿವಾಸಿಗಳ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಪರಿಹಾರ ಸಿಗುತ್ತದೆ ಎಂದು ಕರವೇ ಕಾರ್ಯಕರ್ತರು ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ಸಲ್ಲಿಸಿದ್ದಾರೆ.
ಅಲ್ಲದೆ ಬೆಳಗಾವಿ ಮಹಾನಗರ ಪಾಲಿಕೆಯ ಮುಂಭಾಗದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಬೆಳ್ಳಿಚುಕ್ಕಿ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಅನಾವರಣ ಮಾಡುವಂತೆ ತಾವು ಸ್ಥಳದಲ್ಲೇ ಕ್ರಮ ಜರುಗಿಸಬೇಕು ಎಂದು ಸಚಿವರಿಗೆ ಕರವೇ ಕಾರ್ಯಕರ್ತರು ವಿನಂತಿಸಿದರು.
ಇನ್ನು ಬೆಳಗಾವಿ ಮಹಾನಗರದ ಜನತೆಗೆ ರಾಕಸಕ್ಕೊಪ್ಪ ಹಾಗು ಹಿಡಕಲ್ ಜಲಾಶಯದಿಂದ ನೀರು ಪೂರೈಕೆಯಾಗುತ್ತಿದೆ.ಈಗ ಬೆಳಗಾವಿ ಮಹಾನಗರದ ಜನಸಂಖ್ಯೆ ದುಪ್ಪಟ್ಟು ಆಗಿದೆ. ಹದಿನೈದು ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಬೆಳಗಾವಿ ಮಹಾನಗರಕ್ಕೆ ನೀರು ಪೂರೈಕೆ ವ್ಯವಸ್ಥೆಯನ್ನು ಹೆಚ್ಚಿಸುವ ಅವಶ್ಯಕತೆ ಇದೆ.ಈಗ ವಾರಕ್ಕೂಮ್ಮೆ,ಕೆಲವು ಪ್ರದೇಶಗಳಲ್ಲಿ ಹದಿನೈದು ದಿನಕ್ಕೊಮ್ಮೆ ನೀರು ಪೂರೈಕೆ ಆಗುತ್ತಿದೆ. ಇದರಿಂದ ಬೆಳಗಾವಿ ಮಹಾಜನತೆಗೆ ತೀವ್ರ ತೊಂದರೆ ಆಗುತ್ತಿದೆ. ಬೆಳಗಾವಿ ಮಹಾನಗರಕ್ಕೆ ಹಿಡಕಲ್ ಜಲಾಶಯದಿಂದ ಈಗಾಗಲೇ ಒಂದು ಪೈಪಲೈನ್ ಇದೆ. ಸರ್ಕಾರ ಕೂಡಲೇ ಇನ್ನೊಂದು ಪೈಪಲೈನ್ ಅಳವಡಿಸಲು ಮತ್ತು ಇನ್ನೆರಡು ನೀರು ಶುದ್ಧೀಕರಣ ಘಟಕಗಳನ್ನು ಸ್ಥಾಪಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಬೇಕು.ಕರವೇ ಮನವಿ ಮಾಡಿತು.
ಅಲ್ಲದೇ ಬೆಳಗಾವಿ ಮಹಾನಗರದಲ್ಲಿ ಹಲವಾರು ವರ್ಷಗಳಿಂದ ನಿರಂತರ ನೀರು ಪೂರೈಕೆ ಮಾಡುವ 24 X 7 ಯೋಜನೆಯ ಕಾಮಗಾರಿ ನಡೆಯುತ್ತಿದೆ.ಈ ಕಾಮಗಾರಿ ನಿಗದಿತ ಅವಧಿಯಲ್ಲಿ ಮುಕ್ತಾಯ ಆಗುತ್ತಿಲ್ಲ. ಈ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸುವಂತೆ ಕ್ರಮ ಜರುಗಿಸಿ ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಕರವೇ ಕಾರ್ಯಕರ್ತರು ಆಗ್ರಹಿಸಿದರು. ಕರವೇ ಕಾರ್ಯಕರ್ತರ ಮನವಿ ಸ್ವೀಕರಿಸಿದ ಸಚಿವರು ಆದ್ಯತೆಯ ಮೇರೆ ಬೇಡಿಗಳನ್ನು ಈಡೇರಿಸುವುದಾಗಿ ಕರವೇ ಕಾರ್ಯಕರ್ತರಿಗೆ ಮನವರಿಕೆ ಮಾಡಿದರು.
ಧನ್ಯವಾದಗಳೊಂದಿಗೆ
ಇಂತಿ ನಿಮ್ಮ











