ಐನಾಪೂರ: ಕಾಗವಾಡ ಮತಕ್ಷೇತ್ರದ ಐನಾಪೂರ ಪಟ್ಟಣದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಣಿ ಮಂಡಳಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಐನಾಪೂರ ಪಟ್ಟಣದಲ್ಲಿ ತ್ಯಾಜ್ಯ ನೀರು ಶುದ್ಧೀಕರಣ ಘಟಕದ ಹಾಗೂ ತತ್ಸಬಂಧಿ ಕಾಮಗಾರಿಯ ಭೂಮಿ ಪೂಜೆ ಸಮಾರಂಭದಲ್ಲಿ ಕಾಗವಾಡ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀಮಂತ ಪಾಟೀಲ ಅವರು ಭಾಗವಹಿಸಿ ಸುಮಾರು 13.31 ಕೋಟಿ ರೂ. ವೆಚ್ಚ ದಲ್ಲಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಈ ಸಮಯದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಅಭಿಯಂತರರು ಕಾಮಗಾರಿಯ ಕುರಿತು ಸಾರ್ವಜನಿಕರಿಗೆ ಮಾಹಿತಿಯನ್ನು ಒದಗಿಸಿದರು.ಸ್ಥಳೀಯ ಮುಖಂಡರು ಮಾತನಾಡಿ ಕಾಗವಾಡ ಮತಕ್ಷೇತ್ರದ ಜನಪ್ರಿಯ ಶಾಸಕರು ನಮ್ಮ ಐನಾಪುರ ಪಟ್ಟಣದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದು, ಈಗಾಗಲೇ ಐನಾಪುರ ಪಟ್ಟಣಕ್ಕೆ ಸಂಪರ್ಕಿಸುವ ಎಲ್ಲ ರಸ್ತೆಯನ್ನು ಮಾಡಿದ್ದು, ಅದೇ ರೀತಿ ಶ್ರೀ ಸಿದ್ದೇಶ್ವರ ದೇವಸ್ಥಾನ ಅಭಿವೃದ್ಧಿಗೆ ಹಾಗೂ ದೇವಸ್ಥಾನದ ಆವರಣದಲ್ಲಿ ಟ್ರೀ ಪಾರ್ಕ್ ಮಂಜೂರು ಗೊಳಿಸಿದ್ದು ಮತ್ತು ಎಲ್ಲ ಸಮುದಾಯದ ದೇವಸ್ಥಾನಗಳ ಅಭಿವೃದ್ಧಿಗೆ ಸಹಕರಿಸಿದ್ದಾರೆ. ಹಾಗೂ ಐನಾಪುರ ಪಟ್ಟಣದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸುಧಾರಣೆಗಾಗಿ ಅನುದಾನವನ್ನು ಮಂಜೂರು ಗೊಳಿಸಿದ್ದು, ತಾಲೂಕಾ ಕ್ರೀಡಾಂಗಣ, ಮುರಾರ್ಜಿ ವಸತಿ ಶಾಲೆ ನಿರ್ಮಾಣ ಕಾಮಗಾರಿಗೆ ಅನುದಾನ ಮಂಜೂರು ಗೊಳಿಸಿದ್ದು, ಹೀಗೆ ಹಲವಾರು ಮಹತ್ವದ ಯೋಜನೆಗಳನ್ನು ಕೋಟ್ಯಂತರ ರೂ. ಗಳ ಅನುದಾನವನ್ನು ನಮ್ಮ ಜನಪ್ರಿಯ ಶಾಸಕರು ಐನಾಪುರ ಪಟ್ಟಣಕ್ಕೆ ತಂದು ನಮ್ಮ ಪಟ್ಟಣವನ್ನು ಕ್ಷೇತ್ರದಲ್ಲಿಯೇ ಒಂದು ಮಾದರಿ ಪಟ್ಟಣವನ್ನಾಗಿ ಅಭಿವೃದ್ಧಿಪಡಿಸಿದ್ದಾರೆ ಆದುದರಿಂದ ನಮ್ಮ ಐನಾಪುರ ಪಟ್ಟಣದ ಸಮಸ್ತ ಗ್ರಾಮಸ್ಥರು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.
ಶಾಸಕರು ಮಾತನಾಡಿ ಐನಾಪುರ ಪಟ್ಟಣದಲ್ಲಿ ಈಗಾಗಲೇ ಸಾಕಷ್ಟು ಹಣದಾಣವನ್ನು ಮಂಜೂರು ಗೊಳಿಸಿ ಪಟ್ಟಣವನ್ನು ಅಭಿವೃದ್ಧಿಗೊಳಿಸಲಾಗಿದ್ದು, ಅದೇ ರೀತಿ ಇವತ್ತು ಐನಾಪುರ ಪಟ್ಟಣದಲ್ಲಿ ತ್ಯಾಜ್ಯ ನೀರು ಶುದ್ಧೀಕರಣ ಘಟಕದ ಹಾಗೂ ತತ್ಸಬಂಧಿ ಕಾಮಗಾರಿಗಳಿಗೆ ಸುಮಾರು 13.31 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದ್ದು, ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಉತ್ತಮ ಗುಣಮಟ್ಟದ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಸೂಚನೆ ನೀಡಿದರು ಹಾಗೂ ಪಟ್ಟಣದ ಸಾರ್ವಜನಿಕರು ಎಲ್ಲರೂ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಈ ಸಮಯದಲ್ಲಿ ಸ್ಥಳೀಯ ಮುಖಂಡರು, ಬಿಜೆಪಿ ಕಾಗವಾಡ ಮಂಡಲ ಅಧ್ಯಕ್ಷರು, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು, ನೀರಾವರಿ ಅಧಿಕಾರಿಗಳು, ಪಟ್ಟಣ ಪಂಚಾಯತ್ ಎಲ್ಲ ಸದಸ್ಯರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.