ಬೆಳಗಾವಿ

 ಹಿಂದೂ ಧರ್ಮದ ಬಗ್ಗೆ ಮಾತನಾಡಿದರೆ ಸುಮ್ಮನಿರುವುದಿಲ್ಲ ಚಕ್ರವರ್ತಿ ಸೂಲಿಬೆಲೆ 

ಬೆಳಗಾವಿ : ಯಮಕರಮಡಿ ಗ್ರಾಮದಲ್ಲಿ ಆಯೋಜಿಸಿದ್ದ ‘ನಾನು ಹಿಂದೂ’ ಕಾರ್ಯಕ್ರಮದಲ್ಲಿ ಬುಧವಾರ ಮಾತನಾಡಿರುವ ಚಕ್ರವರ್ತಿ ಸೂಲಿಬೆಲೆಯವರು ಸತೀಶ್ ಜಾರಕಿಹೊಳಿಗೆ ಬಹಿರಂಗ ಸವಾಲು ಹಾಕಿದ್ದಾರೆ.
‘ನನ್ನ ತಾಯಿ ಹಿಂದೂ ಧರ್ಮದ ಬಗ್ಗೆ ಮಾತನಾಡಿದರೆ ನಾನು ಸುಮ್ಮನೆ ಬಿಡುವುದಿಲ್ಲ. ಹಿಂದೂ ಧರ್ಮದ ಬಗ್ಗೆ ಮಾತನಾಡುವುದಕ್ಕೆ ನಾನು ಬಹಿರಂಗವಾಗಿ ಚರ್ಚೆ ಹಾಕುತ್ತೇನೆ ಬನ್ನಿ ಸಾಹುಕಾರರೇ’ ಅಂತಾ ಸತೀಶ್‍ ಜಾರಕಿಹೊಳಿಗೆ ಸೂಲಿಬೆಲೆ ಬಹಿರಂಗ ಚರ್ಚೆಗೆ ಆಹ್ವಾನಿದ್ದಾರೆ. ಬಹಿರಂಗ ಚರ್ಚೆಗೆ ಬರುವಂತೆ ಸತೀಶ್ ಜಾರಕಿಹೊಳಿಗೆ ಚಕ್ರವರ್ತಿ ಸೂಲಿಬೆಲೆ ಸವಾಲು ಹಾಕಿದ್ದಾರೆ 
ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಆಯೋಜಿಸಲಾಗಿದ್ದ ‘ಬುದ್ಧ ಮತ್ತು ಅಂಬೇಡ್ಕರ್ ಸಮಾವೇಶ’ದಲ್ಲಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ, ‘ಹಿಂದೂ ಪದವೆಂದರೆ ಅದು ಕೆಟ್ಟ ಅರ್ಥಗಳನ್ನು ಕೊಡುವಂತದ್ದು’ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು. ‘ಹಿಂದೂ ಎಂಬ ಪದ ಮೂಲತಃ ಭಾರತದ್ದಲ್ಲ, ಅದು ಪರ್ಷಿಯಾದಿಂದ ಬಂದ ಪದ. ಅಸಲಿಗೆ ಹಿಂದೂ ಎಂಬ ಪದಕ್ಕೆ ಪರ್ಷಿಯಾ ಭಾಷೆಯಲ್ಲಿ ಅಶ್ಲೀಲವಾದ ಅರ್ಥಗಳಿವೆ’ ಅಂತಾ ಸತೀಶ ಜಾರಕಿಹೊಳಿ ಹೇಳಿದ್ದರು. ಅವರ ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಹಿಂದೂ ಧರ್ಮದ ಅರ್ಥದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸತೀಶ್ ಜಾರಕಿಹೊಳಿ ವಿರುದ್ಧ ಎಲ್ಲೆಡೆ ಆಕ್ರೋಶ ಭುಗಿಲೆದ್ದಿತ್ತು. ಅವರ ವಿವಾದಾತ್ಮಕ ಹೇಳಿಕೆ ವಿರೋಧಿಸಿ ಯಮಕನಮರಡಿಯಲ್ಲಿ ‘ನಾನು ಹಿಂದೂ’ ಕಾರ್ಯಕ್ರಮ ಆಯೋಜಿಸಲಾಗಿತ್ತು.
TV24 News Desk
the authorTV24 News Desk

Leave a Reply